ಮೂಡುಬಿದಿರೆ

ಗೋಮಾಂಸ ಪ್ರದೇಶಕ್ಕೆ ದಾಳಿ- ಆರೋಪಿಗಳು ಪರಾರಿ- ಗಂಟಾಲ್ಕಟ್ಟೆ ಪ್ರಕರಣ ಮೂಡುಬಿದಿರೆ ಪೊಲೀಸ್ ಕಾರ್ಯಾಚರಣೆ

ಮೂಡುಬಿದಿರೆ ಗಂಟಾಲ್ಕಟ್ಟೆಯ ಜಲೀಲ್ ಎಂಬವರ ಮನೆ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ದಾಳಿ ನಡೆಸಿ ಮಾಂಸ ಸಹಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.


ದಾಳಿ ನಡೆಸಿದಾಗ ಮಾಂಸ 50ಕೆ.ಜಿ., ಮಾಂಸ ಮಾಡಲು ಕದ್ದು ತಂದಿದ್ದ 3 ದನಗಳನ್ನು ವಶಕ್ಕೆ ಪಡೆಯಲಾಗಿದೆ. ದನಗಳನ್ನು ಗೋಶಾಲೆಗೆ ಒಪ್ಪಿಸಲಾಗಿದೆ.


ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಆತನ ಪುತ್ರ ಸೊಹೇಲ್, ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪೊಲೀಸ್ ದಾಳಿ ಸಂದರ್ಭ ಪರಾರಿಯಾಗಿದ್ದಾರೆ.


2 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಕೃಷ್ಣಪ್ಪ, ಅಖಿಲ್ ಅಹಮ್ಮದ್, ನಾಗರಾಜ್ ಕಾರ್ಯಾಚರಣೆ ನಡೆಸಿದ್ದಾರೆ.

Related posts

ಶ್ರೀ ಮಹಾವೀರ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ

Madhyama Bimba

ಕಾಂತಾವರ ಯಕ್ಷದೇಗುಲ ಸಂಸ್ಥೆಯ ವಾರ್ಷಿಕ ಯಕ್ಷೋಲ್ಲಾಸದಲ್ಲಿ ಗುಂಡಿಮಜಲು ಮತ್ತು ಜೋಗಿದ್ವಯರಿಗೆ ಯಕ್ಷದೇಗುಲ ಪ್ರಶಸ್ತಿ

Madhyama Bimba

ಬೆಳುವಾಯಿ ಮನೆಯ ಹಟ್ಟಿಯಿಂದಲೇ ದನ ಕದ್ದ ಆರೋಪಿ ಬಂಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More