ಹೆಬ್ರಿ: ಮಹಿಳೆಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 1ರಂದು ವರದಿಯಾಗಿದೆ.

ಶಿವಪುರ ಕಾಚಿನ ಮಲೆ ಚಲ್ಲಂಟೆ ನಿವಾಸಿ ಮಂಜುಳ ಶೇರಿಗಾರ್(51) ಆತ್ಮಹತ್ಯೆ ಮಾಡಿಕೊಂಡವರು.
ಮಂಜುಳರವರು ಮನೆ ಕೆಲಸ ಮಾಡಿಕೊಂಡಿದ್ದು, ಇವರು ಗರ್ಭಕೋಶದ ಕ್ಯಾನ್ಸರ್ ಮತ್ತು ಹೆಚ್ಐವಿ ಖಾಯಿಲೆಯಿಂದ ಬಳಲುತ್ತಿದ್ದು, ಈ ವಿಚಾರವಾಗಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
