ಹಿರ್ಗಾನ: ಹಿರ್ಗಾನ ಸಮೀಪ ಕಾರಿಗೆ ಸೈಕಲ್ ಅಡ್ಡ ಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಕಾರ್ಕಳ ಅಭಿಯಂತರದ ಸದಾನಂದ ನಾಯ್ಕ ಅವರು ತನ್ನ ಕಾರಿನಲ್ಲಿ ಪತ್ನಿ ಹಾಗೂ ಮಗುವಿನ ಜೊತೆ ತನ್ನ ಮನೆಯಾದ ಬ್ರಹ್ಮಾವರದ ಚಾಂತಾರಿಗೆ ಹೊರಟಿದ್ದರು. ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಹಿರ್ಗಾನ ಬಳಿ ಏಕಾಎಕಿ ಸೈಕಲ್ ಸವಾರ ಅಡ್ಡಬಂದ ಪರಿಣಾಮ ಸೈಕಲ್ ನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ. ಸದಾನಂದ ನಾಯ್ಕ ಹಾಗೂ ಪತ್ನಿ ಮಗುವಿಗೂ ಗಾಯಗಳಾಗಿದ್ದು ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆದು ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ.
