ಹೆಬ್ರಿ: ವ್ಯಕ್ತಿಯೋರ್ವರು ವಿಷ ಪದಾರ್ಥ ಸೇವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತ್ಯವಿಗೀಡಾದ ಘಟನೆ ಡಿ. 02ರಂದು ವರದಿಯಾಗಿದೆ.

ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರದ ತಮ್ಮು ಪೂಜಾರಿ (78) ಮೃತಪಟ್ಟವರು.
ಇವರಿಗೆ ಕುಡಿತದ ಚಟವಿದ್ದು, ನ. 20ರಂದು ತನ್ನ ಮನೆಯಲ್ಲಿದ್ದ ವಾಹನದ ಬ್ರೇಕ್ ಪ್ಯೂಡ್ ಆಯಿಲ್ (ವಿಷ ಪದಾರ್ಥ) ವನ್ನು ಮದ್ಯಪಾನವೆಂದು ಭಾವಿಸಿ ಸೇವಿಸಿರುತ್ತಾರೆ. ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿರುತ್ತಾರೆ. ಡಿ. 02ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
