ವಕೀಲರ ಸಂಘ ಕಾರ್ಕಳ ಇದರ ವತಿಯಿಂದ ವಕೀಲರ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಕೆ. ಎಮ್. ಸಿ. ಆಸ್ಪತ್ರೆ ಕಾರ್ಕಳ ಇವರಿಂದ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಡಿ. 3 ರಂದು ನಡೆಯಿತು.

ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಶ್ರೀಮತಿ. ಶರ್ಮಿಳಾ ಸಿ. ಎಸ್. ದೀಪ ಬೆಳಗಿಸಿ ಉದ್ಘಾಟಿಸಿದರು.


ಪ್ರಧಾನ ಸಿವಿಲ್ ನ್ಯಾಯಾಧೀಶೆ ಕೋಮಲ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗೀತಾ ಹಾಗೂ ಕೆ. ಎಮ್. ಸಿ. ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸುದೀಪ್ ಪಡಿವಾಳ್, ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್, ಕಾರ್ಯದರ್ಶಿ ಪದ್ಮ ಪ್ರಸಾದ್ ಜೈನ್. ಎನ್ ಹಾಗೂ ಉಪಾಧ್ಯಕ್ಷ ಕೆ. ಹರೀಶ್ ಅಧಿಕಾರಿ ಉಪಸ್ಥಿತರಿದ್ದರು.

