ಕಾರ್ಕಳ

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಕಾರ್ಕಳ ಸಮಿತಿ ಸದಸ್ಯರಾಗಿ ಪ್ರಶಾಂತ್ ಶೆಟ್ಟಿ ಆಯ್ಕೆ

ಕಾರ್ಕಳ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಕಾರ್ಕಳ ತಾಲೂಕು ಸಮಿತಿಯಲ್ಲಿ ತೆರವಾದ ಒಂದು ಸ್ಥಾನಕ್ಕೆ ಉಳಿದ ಅವಧಿಗೆ ಪ್ರಶಾಂತ್ ಶೆಟ್ಟಿ ಗುತ್ತುಮನೆ ಬೈಲೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಬೈಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾಗಿ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾಗಿ, ವ್ಯವಸ್ಥಾಪನ ಸಮಿತಿಯ ನಿಟಕಪೂರ್ವ ಕಾರ್ಯಾಧ್ಯಕ್ಷರಾಗಿ, ನೀರೆ ಬೈಲೂರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಸರಕಾರಿ ಪ್ರೌಢಶಾಲೆ ಬೈಲೂರು ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನಾಮನಿರ್ದೇಶನ ಸದಸ್ಯರಾಗಿ, ಶಿವಾಯ ಗೆಳೆಯರ ಬಳಗ ಬೀದಿ ಬೈಲೂರು ಇದರ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪ.ಜಾತಿ/ ಪಂಗಡದ ಜನಾಂಗದವರಿಂದ ಅಹವಾಲು ಸಲ್ಲಿಕೆಗೆ ಅವಕಾಶ

Madhyama Bimba

ನಿಟ್ಟೆಯಲ್ಲಿ ಕ್ರಿಸ್ಮಸ್ ಆಚರಣೆ

Madhyama Bimba

ಕಾರ್ಕಳ ಆರಾಮ್ ಫರ್ನಿಚರ್‌ನಲ್ಲಿ ಪಿಜನ್ ಕಂಪೆನಿಯ ವಿಶೇಷ ಕೊಡುಗೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More