ಕಾರ್ಕಳ

ಈದು -ನಾರಾವಿ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಒಂದು ಲಕ್ಷ ರೂಪಾಯಿ ಸಹಾಯ ಧನ ಹಸ್ತಾಂತರ

ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್ ಆಚಾರ್ಯ ಇವರು ಒಂದು ತಿಂಗಳ ಹಿಂದೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಮನೆಯ ಮಾಡಿನಿಂದ ಕೆಳಗೆ ಬಿದ್ದು ಸೊಂಟ ಕಾಲುಗಳಿಗೆ ಗಂಭೀರ ಗಾಯವಾಗಿ ಮಂಗಳೂರಿನ ಎ.ಜೆ ಹಾಸ್ಪಿಟಲ್ ನಲ್ಲಿ ಒಂದು ತಿಂಗಳ ಕಾಲ ಚಿಕಿತ್ಸೆ ಪಡೆದು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.


ಸಂತೋಷ್ ಆಚಾರ್ಯ ಅವರು ಕಡು ಬಡತನದಿಂದ ವಯಸ್ಸಾದ ತಂದೆ ತಾಯಿ ತನ್ನ ಎರಡು ವರ್ಷದ ಮಗು ಮತ್ತು ತನ್ನ ಹೆಂಡತಿಯೊಂದಿಗೆ ಜೀವನ ಸಾಗಿಸುತ್ತಿದ್ದು ಮನೆಗೆ ಆದರ ಸ್ತಂಭವಾಗಿದ್ದ ಸಂತೋಷ್ ಈ ಆಕಸ್ಮಿಕ ಅವಘಡದಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.


ಈ ಕಷ್ಟದ ಸಮಯವನ್ನು ತಿಳಿದ ಪರಸ್ಪರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಊರಿನವರ ಸಹಕಾರದಿಂದ ಒಂದು ಲಕ್ಷದ ಸಹಾಯಧನವನ್ನು ನೀಡಿದ್ದಾರೆ.

Related posts

ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ರೋಟ್ರಾಕ್ಟ್ ಕ್ಲಬ್ ಪದಗ್ರಹಣ

Madhyama Bimba

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba

ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More