ಕಾರ್ಕಳ

ಈದು -ನಾರಾವಿ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಒಂದು ಲಕ್ಷ ರೂಪಾಯಿ ಸಹಾಯ ಧನ ಹಸ್ತಾಂತರ

ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್ ಆಚಾರ್ಯ ಇವರು ಒಂದು ತಿಂಗಳ ಹಿಂದೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಮನೆಯ ಮಾಡಿನಿಂದ ಕೆಳಗೆ ಬಿದ್ದು ಸೊಂಟ ಕಾಲುಗಳಿಗೆ ಗಂಭೀರ ಗಾಯವಾಗಿ ಮಂಗಳೂರಿನ ಎ.ಜೆ ಹಾಸ್ಪಿಟಲ್ ನಲ್ಲಿ ಒಂದು ತಿಂಗಳ ಕಾಲ ಚಿಕಿತ್ಸೆ ಪಡೆದು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.


ಸಂತೋಷ್ ಆಚಾರ್ಯ ಅವರು ಕಡು ಬಡತನದಿಂದ ವಯಸ್ಸಾದ ತಂದೆ ತಾಯಿ ತನ್ನ ಎರಡು ವರ್ಷದ ಮಗು ಮತ್ತು ತನ್ನ ಹೆಂಡತಿಯೊಂದಿಗೆ ಜೀವನ ಸಾಗಿಸುತ್ತಿದ್ದು ಮನೆಗೆ ಆದರ ಸ್ತಂಭವಾಗಿದ್ದ ಸಂತೋಷ್ ಈ ಆಕಸ್ಮಿಕ ಅವಘಡದಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.


ಈ ಕಷ್ಟದ ಸಮಯವನ್ನು ತಿಳಿದ ಪರಸ್ಪರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಊರಿನವರ ಸಹಕಾರದಿಂದ ಒಂದು ಲಕ್ಷದ ಸಹಾಯಧನವನ್ನು ನೀಡಿದ್ದಾರೆ.

Related posts

ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲಿರುವ ನಿಟ್ಟೆ ವಿದ್ಯಾರ್ಥಿನಿ

Madhyama Bimba

ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ  ಮಿಂಚಿದ ಹಿರ್ಗಾನದ ಅದಿತಿ ಶರ್ಮಾ ಹಾಗೂ ರತಿ ಶರ್ಮಾ

Madhyama Bimba

ಉಡುಪಿ ಪರ್ಯಾಯ ಮೆರವಣಿಗೆಯಲ್ಲಿ ಕೇಸರಿ ದ್ವಜ ಹಾರಿಸದೆ ಕಾಂಗ್ರೆಸ್ ಬಾವುಟ ಪ್ರದರ್ಶಿಸಬೇಕಿತ್ತಾ- ಸುನೀಲ್ ಕುಮಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More