ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ಡಿ.5 ರಿಂದ 06ರವರೆಗೆ ನಡೆಯಿತು.

ನಿಟ್ಟೆ ಡಾ. ಎನ್ ಎಸ್. ಎ.ಎಮ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ರಶ್ಮಿತಾ ಗಣಪತಿ ನಾಯ್ಕ್ ಭಾಗವಹಿಸಿ ಎತ್ತರ ಜಿಗಿತದಲ್ಲಿ ಬೆಳ್ಳಿಯ ಪದಕ ಪಡೆದು ಲಾಕ್ನೋದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾಳೆ.


