ಬೈಲೂರು: ಉಡುಪಿ-ಪಳ್ಳಿ-ಕಣಂಜಾರು-ಕಾರ್ಕಳ ಮಾರ್ಗವಾಗಿ ಸಂಚರಿಸುತ್ತಿದ್ದ ಸರಕಾರಿ ಬಸ್ಸು ಗ್ರಾಮಸ್ಥರ ಆಗ್ರಹ ಹಾಗೂ ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಸತತ ಪ್ರಯತ್ನದಿಂದ ಡಿ.10ರಿಂದ ಮತ್ತೆ ಸಂಚಾರ ಪ್ರಾರಂಭಿಸಿದೆ. ಕಳೆದ 2024ರ ಡಿಸೆಂಬರ್ ತಿಂಗಳಲ್ಲಿ ಶಕ್ತಿ ಯೋಜನೆಯಡಿ ಈ ಮಾರ್ಗ ಮೂಲಕ ಸಂಚಾರ ಆರಂಭಿಸಿದ ಬಸ್ಸು ಮಾರ್ಚ್ 2025ರ ವೇಳೆಗೆ ಸಂಚಾರ ಸ್ಥಗಿತಗೊಳಿಸಿತ್ತು. ಇದರಿಂದ ಈ ಪ್ರದೇಶದ ಶಾಲಾ ವಿದ್ಯಾರ್ಥಿಗಳು ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರು ಸಮಸ್ಯೆಯನ್ನು ಅನುಭವಿಸುತ್ತಿದ್ದರು.

ನೀರೆ ಗ್ರಾ.ಪಂ. ಅಧ್ಯಕ್ಷರಾದ ಸಚ್ಚಿದಾನಂದ ಪ್ರಭುರವರೊಂದಿಗೆ ಸ್ಥಳೀಯರು, ವಿದ್ಯಾರ್ಥಿಗಳು, ಜಿಲ್ಲಾಧಿಕಾರಿ ಹಾಗೂ ಆರ್ಟಿಓ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತಂದು ಮತ್ತೆ ಬಸ್ಸು ಸಂಚಾರವನ್ನು ಆರಂಭಿಸುವಲ್ಲಿ ಯಶಸ್ವಿಯಾಗಿದ್ದಾರೆ.



