ಕಾರ್ಕಳ

ಕ್ರೈಸ್ಟ್‌ಕಿಂಗ್: ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್‌ನವರು ಬೆಂಗಳೂರಿನಲ್ಲಿ ನಡೆಸಿದ ಆಯ್ಕೆ ಶಿಬಿರದಲ್ಲಿ ಭಾರತದ 49ನೇ ಜೂನಿಯರ್ ಬಾಲಕಿಯರ ರಾಷ್ಟ್ರೀಯ ವಾಲಿಬಾಲ್ ಛಾಂಪಿಯನ್‌ಶಿಪ್ ಪಂದ್ಯಾಟದ ಕರ್ನಾಟಕ ವಾಲಿಬಾಲ್ ತಂಡಕ್ಕೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವರುಣ ಶೆಟ್ಟಿ ಆಯ್ಕೆಯಾಗಿದ್ದಾಳೆ.

ರಾಷ್ಟ್ರಮಟ್ಟದ ಪಂದ್ಯಾಟವು ಇದೇ ಡಿಸೆಂಬರ್ ತಿಂಗಳ 16 ರಿಂದ 21ರವರೆಗೆ ರಾಜಸ್ಥಾನದ ಜುಂಜುನು ಜಿಲ್ಲೆಯ ಪಿಲಾನಿಯಲ್ಲಿ ನಡೆಯಲಿದ್ದು ಇಲ್ಲಿ ವರುಣ ಶೆಟ್ಟಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾಳೆ. ಈಕೆ ಜೋಡುರಸ್ತೆಯ ಕೊರಚೊಟ್ಟುವಿನ   ಪ್ರಭಾಕರ ಶೆಟ್ಟಿ ಮತ್ತು ಶ್ರೀಮತಿ ಶೋಭಾ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.

Related posts

ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

Madhyama Bimba

ಹೆಬ್ರಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Madhyama Bimba

ರಾ.ಹೆ. 169 : ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡದ ಇಲಾಖೆ- ಸಾಣೂರಿನಲ್ಲಿ ಸಾರ್ವಜನಿಕರಿಂದಲೇ ತಾತ್ಕಾಲಿಕ ತಂಗುದಾಣ ನಿರ್ಮಾಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More