ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇದರ ಸಹಯೋಗದಲ್ಲಿ ಅಬ್ಬನಡ್ಕ – ಇಟ್ಟಮೇರಿ ಸಂಪರ್ಕ ರಸ್ತೆಯಿಂದ ಬೆಳ್ಮಣ್ಣು ಶ್ರೀ ದಉರ್ಗಾಪರಮೇಶ್ವರಿ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿದ್ದ ಹುಲ್ಲು-ಗಿಡಗಂಟಿ-ಪೊದೆ ಕಡಿದು ಸ್ವಚ್ಛ ಮಾರ್ಗಂ ಕಾರ್ಯಕ್ರಮದ ಮೂಲಕ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಕೋಶಾಧಿಕಾರಿ ಪ್ರದೀಪ್ ಸುವರ್ಣ ಕೆಮ್ಮಣ್ಣು, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಧ್ಯಕ್ಷರಾದ ಕೀರ್ತನ್ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ಸುಭಾಸ್ ಕೆಮ್ಮಣ್ಣು, ಕಿರಣ್ ಶೆಟ್ಟಿ, ಅಭಿಷೇಕ್ ಕುಲಾಲ್, ಮೊದಲಾದವರಿದ್ದರು.



