ಆಲೂರು. ತಾಲೂಕಿನ ಕದಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಟ್ಟದಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ
ಈ ವಿದ್ಯಾರ್ಥಿ ಗೆ ಕದಾಳು ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಮತ್ತು ಆಲೂರು ತಾಲೂಕಿನ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್. ಕಬ್ಬಿನಲ್ಲಿ ಜಗದೀಶ್. ಕಿರಗಡಳು ಗ್ರಾಮದ ಮಧು. ಆಲೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ. ಹಾಗೂ ಇತರ ಸಂಘ-ಸಂಸ್ಥೆಗಳು ಎಲ್ಲರೂ ಇವನನ್ನು ಅಭಿನಂದಿಸಿ ಈ ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಇಡೀ ತಾಲೂಕಿನ ಕೀರ್ತಿ ತರಲೆಂದು ಶುಭ ಹಾರೈಸಿದ್ದಾರೆ.
