ಶಿರ್ತಾಡಿ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ವಾರ್ಷಿಕ ಕ್ಯಾಲೆಂಡರ್ನ್ನು ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಶಿರ್ತಾಡಿ ನವಮೈತ್ರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ವಿ ಶೆಟ್ಟಿ ಯವರು ಕ್ಯಾಲೆಂಡರ್ನ್ನು ಬಿಡುಗಡೆಗೊಳಿಸಿದರು.

ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್, ಉಪಾಧ್ಯಕ್ಷ ಚಿಂತನ್ ಲೋಬೋ, ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೆಸ್ ಡಿಸೋಜ, ಪುರೋಹಿತರಾದ ವೇ. ಮೂ. ಉಮಾಶಂಕರ ಭಟ್, ಉಮೇಶ್ ಭಟ್, ಉದ್ಯಮಿ ವಿಶ್ವನಾಥ್ ಕೋಟ್ಯಾನ್ ಹನ್ನೇರ್, ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮನಾಜಿ, ಪೆರಾಡಿ ಸೊಸೈಟಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಲತೀಫ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

