ಕಾರ್ಕಳ

ಗೃಹ ಲಕ್ಷ್ಮೀಗೆ ಸಚಿವೆ ಲಕ್ಷ್ಮೀಯೇ ಕಂಟಕ: ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕಳೆದ ಬಾರಿಯೂ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಮರುಳು ಮಾಡಿ ಮತ ಸೆಳೆಯುವ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್ ಜಾರಿಗೊಳಿಸಿದ ಮಹಿಳೆಯರ ಪರವಾದ ಗ್ಯಾರಂಟಿ ಯೋಜನೆಗಳು ಗಂಡಸರ ಜೇಬಿಗೆ ಕೈ ಹಾಕಿ ಹೆಂಗಸರಿಗೆ ನೀಡಿದ ಕುತಂತ್ರ ಈಗ ಜಗಜಾಹೀರಾಗಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2000/- ನೀಡುವ ಖಾತ್ರಿ ನೀಡಿದ ಸರಕಾರ ಪ್ರಾರಂಭದ ದಿನದಿಂದಲೂ ಎಡವುತ್ತಾ ಸಾಗುತಿದ್ದು ಯಾವುದೇ ಚುನಾವಣೆ ಅಥವಾ ಉಪಚುಣಾವಣೆ ಬಂದಾಗ ಮಹಿಳೆಯರ ಖಾತೆಗೆ ಮಾತ್ರ ಹಣ ನೀಡಿ ಮತ್ತೆ ಮತ್ತೆ ತನ್ನ ಹುಳುಕನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡಿತ್ತಿರುವುದು ನಾಚಿಕೆಗೇಡು. ತಾಂತ್ರಿಕ ಕಾರಣಗಳನ್ನು ನೀಡಿ ಹಲವು ತಿಂಗಳಿನಿಂದ ಫಲಾನುಭವಿಗಳಿಗೆ ಸತಾಯಿಸುತ್ತಿರುವ ಸರಕಾರ ಇನ್ನೂ ಒಂದು ಹೆಜ್ಜೆ ಹೋಗಿ ಬೆಳಗಾವಿ ಅಧಿವೇಶನದ ಸದನದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ನೀಡಿ ಜನತೆಗೆ ಪಂಗ ನಾಮ ಹಾಕಲು ಸಂಬಂಧಪಟ್ಟ ಇಲಾಖೆ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಯತ್ನಿಸಿರುವುದು ಇಡೀ ಸರಕಾರದ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಂತಿದೆ.

ಪದೇ ಪದೇ ನುಡಿದಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಬಡಾಯಿಕೊಚ್ಚಿಕೊಳ್ಳುತ್ತಿರುವ ಕಾಂಗ್ರೆಸ್ ಸರಕಾರ ಯಾವುದೇ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಈ ರಾಜ್ಯದ ಜನರನ್ನು ಮೂರ್ಖರ ಪಟ್ಟಿಗೆ ಸೇರಿಸುವ ಪ್ರಯತ್ನದಲ್ಲಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಸಂಬಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವೆ ಒಬ್ಬ ಮಹಿಳೆಯಾಗಿದ್ದರೂ ಕೂಡ ಮಹಿಳೆಯರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೆ ಪದೇ ಪದೇ ಸುಳ್ಳು ಹೇಳಿಕೆ ನೀಡುವ ಮೂಲಕ ಬಡ ಮಹಿಳೆಯರ ಬದುಕಿಗೆ ಕಂಟಕಪ್ರಾಯ ಆಗಿದ್ದಾರೆ. ಇವರುಗಳ ವರ್ತನೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿನಯ ಡಿ ಬಂಗೇರ, ಜಿಲ್ಲಾ ಉಪಾಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಕವಿತಾ ಹರೀಶ್ ಮೊದಲಾದವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

 

Related posts

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರ ವೇತನ ಬಿಡುಗಡೆ ಇದು ಸಹಜ ಪ್ರಕ್ರಿಯೆ, ಇದರಲ್ಲಿ ಶಾಸಕರ ಯಾವುದೇ ಪಾತ್ರವಿಲ್ಲ- ಪ್ರಚಾರಕ್ಕಾಗಿ ಗಿಮಿಕ್‌ಗಳನ್ನು ಬಿಟ್ಟು ಶಾಸಕರು ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನ ನೀಡಲಿ: ಶ್ರೀಮತಿ ಭಾನು ಭಾಸ್ಕರ ಪೂಜಾರಿ

Madhyama Bimba

ನಕ್ರೆ ಪರಪು ಮನೆಯಲ್ಲಿ ಕಳ್ಳತನ

Madhyama Bimba

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ ಮತ್ತು ಋಕ್ ಸಂಹಿತಾ ಮಹಾಯಾಗದ ಆಮಂತ್ರಣ ಪತ್ರ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More