ಕಾರ್ಕಳ: ನಿಟ್ಟೆ ಲೆಮಿನಾ ಕ್ರಾಸ್ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 17ರಂದು ವರದಿಯಾಗಿದೆ.

ನಿಟ್ಟೆ ದೂಪದಕಟ್ಟೆ ನಿವಾಸಿ ಶೇಸಪ್ಪ ಗಾಯಗೊಂಡವರು.

ಕಾರ್ಕಳದಿಂದ ನಿಟ್ಟೆಯ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಚಾಲಕನು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿಕೊಂಡು ಬಂದು ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ಪರಿಣಾಮ ಶೇಸಪ್ಪರವರು ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
