ಕಾರ್ಕಳದ ಕ್ರೈಸ್ಟ್ಕಿಂಗ್ ಶಾಲೆಯಲ್ಲಿ ಡಿ.23ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಶ್ರೀರಾಮ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನವನ್ನು, ಅನುಜ್ಞಾ ಪ್ರಬಂಧ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಹಿರಿಯರ ವಿಭಾಗದ ವಿದ್ಯಾರ್ಥಿಗಳಾದ ಜೆನಿಫರ್ ಪ್ರಬಂಧ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಮತ್ತು ಅಕ್ಷರ ಬಿ ಪೈ ಇವರು ಕವನ ವಾಚನದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

