ಕಾರ್ಕಳ

ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಅಧ್ಯಕ್ಷರ ಭೇಟಿ

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮೈಸೂರು ಇವರು ಪ್ರಾಧಿಕಾರದ ವಿವಿಧ ಯೋಜನೆಗಳಾದ “ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಅದರಂತೆ ಇಂದು ಶ್ರೀ ಮಹಾವೀರ ಕಾಲೇಜಿಗೆ ಭೇಟಿ ನೀಡಿದರು. ಅವರೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಆಪ್ತ ಕಾರ್ಯದರ್ಶಿ ಪ್ರೊ. ಶ್ರೀನಿವಾಸರವರು ಭಾಗವಹಿಸಿದ್ದರು.

ಇವರನ್ನು ಕಾಲೇಜಿನ ಆಡಳಿತಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಬರಮಾಡಿಕೊಂಡು ಕರ್ನಾಟಕದ ಮನೆ ಗ್ರಂಥಾಲಯದ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಅವರು ಕಾಲೇಜಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳನ್ನು ವೀಕ್ಷಿಸಿ ಗ್ರಂಥಾಲಯದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.

Related posts

ಕಾರ್ಕಳ ರೋಟರಿ ಕ್ಲಬ್ ವತಿಯಿಂದ “ದೇವರ ಮಕ್ಕಳೊಂದಿಗೆ ನಮ್ಮ ಸಮಯ” ವಿಶೇಷ ಸೇವಾ ಕಾರ್ಯಕ್ರಮ

Madhyama Bimba

ಗ್ರಾಮ ಸಭೆಯಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಅಡ್ಡಿಪಡಿಸಿರುವ ಬಿಜೆಪಿಗರಿಂದ ಈಗ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಂಬದ್ದ ಹೇಳಿಕೆ ಖಂಡನೀಯ: ಭಾನು ಭಾಸ್ಕರ್ ಪೂಜಾರಿ

Madhyama Bimba

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More