Blog

ಮುನಿಯಾಲು ಬಂಟರ ಸಂಘದ ಕಾರ್ಯಕ್ರಮ

ಮುನಿಯಾಲು ಬಂಟರಸಂಘದ ವತಿಯಿಂದ ಹದಿನೆಂಟನೇ ವರ್ಷದ ವಿದ್ಯಾರ್ಥಿ ವೇತನ,  ಆಶಕ್ತರಿಗೆ ಸಹಾಯಧನ ಹಾಗೂ ಸಾಧಕರಿಗೆ ಸನ್ಮಾನ  ಸಮಾರಂಭವು  ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು.


ಈ ಸಂದರ್ಭದಲ್ಲಿ, ಭಾರತ ಸೈನ್ಯ ದಲ್ಲಿ ಹದಿನೇಳು ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಮುನಿಯಾಲಿನ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಚವಟಿ ಶಂಕರ್ ಶೆಟ್ಟಿ ಅಲ್ಲದೇ ಜೂನಿಯರ್ ಕಬಡ್ಡಿ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿಪುಲ್ ಶೆಟ್ಟಿ ಮುಟ್ಲುಪಾಡಿ ಇವರನ್ನು ಸನ್ಮಾನಿಸಲಾಯಿತು.

     ಕಾರ್ಯಕ್ರಮದ ವೇದಿಕೆಯಲ್ಲಿ ಬಂಟರ ಸಂಘ ಮುನಿಯಾಲು ಇದರ ಗೌರವಧ್ಯಕ್ಷ ರಾದ ದಿವಾಕರ್ ವೈ ಶೆಟ್ಟಿ, ಸಂಘದ ಅಧ್ಯಕ್ಷರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ರಾಜ್ ಶೆಟ್ಟಿ ಮತ್ತು ನವೀನ್ ರಾಜ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಂದ್ರ ಶೆಟ್ಟಿ ಇದ್ದು, ಕಾರ್ಯಕ್ರಮದಲ್ಲಿ ಗಣ್ಯರಾದ ಸೀತಾರಾಮ್ ಕಡಂಬ, ಅಶೋಕ್ ಶೆಟ್ಟಿ, ಭುಜಂಗ ಶೆಟ್ಟಿ, ಸುಜಯ್ ಶೆಟ್ಟಿ, ಸುಂದರ್ ಶೆಟ್ಟಿ, ಸುರೇಶ್ ರೈ, ಸಮೃದ್ಧಿ ಪ್ರಕಾಶ್ ಶೆಟ್ಟಿ ಹಾಗೂ ಪ್ರಸನ್ನ ಶೆಟ್ಟಿ ಮತ್ತು ದಯಾನಂದ ಶೆಟ್ಟಿ ಮುಟ್ಲುಪಾಡಿ ಇವರು ಉಪಸ್ಥಿತರಿದ್ದರು.
ಅಲ್ಲದೇ ವಿದ್ಯಾರ್ಥಿ ಗಳು, ಪೋಷಕರು ಹಾಗೂ ಬಂಟ ಸಮಾಜಬಂದುಗಳು ಉಪಸ್ಥಿತರಿದ್ದರು.

Related posts

ನ್ಯಾಯವಾದಿ ಎಂ ಕೆ ವಿಜಯ ಕುಮಾರ್ ಸ್ಮರಣಾರ್ಥ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Madhyama Bimba

ನಲ್ಲೂರು ಗೋ ಕಳ್ಳತನ – ಶಿವಪ್ರಸಾದ್ ಬಂಧನ

Madhyama Bimba

ಯಸಳೂರು ವ್ಯಾಪ್ತಿಯ ವ್ಯಕ್ತಿ ಬಣಕಲ್ ನಲ್ಲಿ ಕೊಲೆ –

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More