ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಎದುರಿಸುವ ಸಮಸ್ಯೆಗಳು ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡುವ ವಿಧಾನ ಮತ್ತು ಕಠಿಣ ವಿಷಯಗಳನ್ನು ಸುಲಭವಾಗಿ ಕರಗತಮಾಡಿಕೊಂಡು ಕಲಿಯುವ ಬಗೆಗಿನ ಸಲಹೆ ಕಾರ್ಯಾಗಾರ ನಡೆಯಿತು.

ವಿದ್ಯಾಭಾರತಿ ಕರ್ನಾಟಕ ಪ್ರಾಂತ ಬೆಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಉಮೇಶ್ ಕಾರ್ಯಾಗಾರ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಅಮೃತಭಾರತಿ ಟ್ರಸ್ಟ್ನ ಕಾರ್ಯದರ್ಶಿ ಗುರುದಾಸ್ ಶೆಣೈ, ಬಾಲಕೃಷ್ಣ ಮಲ್ಯ, ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ತರಗತಿ ಶಿಕ್ಷಕರಾದ ಮಹೇಶ್ ಹೈಕಾಡಿ, ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಉಪಸ್ಥಿತರಿದ್ದರು.

