ಕಾರ್ಕಳ: ಉಡುಪಿ ರೋಡ್ ಸೇಫ್ಟಿ ಅಥಾರಿಟಿ ನಿರ್ಧಾರ ಪ್ರಕಾರ 6 ಚಕ್ರ ಮತ್ತು ಅದಕ್ಕಿಂತ ಜಾಸ್ತಿ ಇರುವಂತಹ ಎಂಎಂಆರ್ಡಿ ಕಾಯ್ದೆ ಅಡಿಯಲ್ಲಿ ಬರುವ ಕೆಂಪು ಕಲ್ಲು, ಹೊಯಿಗೆ, ಎಂ ಸ್ಯಾಂಡ್ ಇತ್ಯಾದಿ ಸಾಗಾಟ ಮಾಡುವಂತಹ ವಾಹನಗಳು ಕಡ್ಡಾಯವಾಗಿ ಪ್ರತಿ ಗಂಟೆಗೆ 60ಕಿ.ಮೀ ವೇಗ ತಡೆಯನ್ನು ಅಳವಡಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ಜನವರಿ 7ರಂದು ಆದೇಶ ಮಾಡಿದ್ದು, ಮುಂದಿನ 10 ದಿನಗಳ ಒಳಗೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಸದಿದ್ದಲ್ಲಿ ಜಿಲ್ಲೆಯಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
