ಕಾರ್ಕಳ: ಕುಕ್ಕುಂದೂರು ಗ್ರಾಮದ ನಕ್ರೆ ಪರಪ್ಪು ಶ್ರೀನಿವಾಸ ನಾರಾಯಣ ಮೂಲ್ಯ(41)ರವರ ಮನೆಯಲ್ಲಿ ಕಳ್ಳತನವಾದ ಘಟನೆ ವರದಿಯಾಗಿದೆ.

ಯಾರೋ ಕಳ್ಳರು ಮುಖ್ಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಬೆಡ್ ರೂಮ್ನ ಕಪಾಟಿನಲ್ಲಿದ್ದ ಬೆಳ್ಳಿಯ ಸಣ್ಣ ದೀಪ -2, ಬೆಳ್ಳಿಯ ದೊಡ್ಡ ದೀಪ -2, ಬೆಳ್ಳಿಯ ಚೆಂಬು -1 , ಬೆಳ್ಳಿಯ ತಟ್ಟೆ – 1 ಹಾಗೂ 3 ಗ್ರಾಂ ತೂಕದ ಒಂದು ಚಿನ್ನದ ಒಡ್ಡುಂಗುರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
