Blog

ದೆಹಲಿಯಲ್ಲಿ ನಡೆಯುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನಲ್ಲಿ ಭಾಗವಹಿಸಲು ಇನ್ನಾ ಮನು ಶೆಟ್ಟಿಗೆ ಅವಕಾಶ

ಜನವರಿ 9 ರಿಂದ 12 ರವರೆಗೆ ದೆಹಲಿಯ ಭಾರತ ಮಂಟಪಂ ನಲ್ಲಿ ನಡೆಯುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026 ನಲ್ಲಿ ಭಾಗವಹಿಸಲು ಸತತ ದ್ವಿತೀಯ ಬಾರಿಗೆ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನ ಗ್ರಾಮದ   ಮನು ಶೆಟ್ಟಿ ಇನ್ನಾ ಆಯ್ಕೆಯಾಗಿದ್ದಾರೆ.


ವಿಕಸಿತ ಭಾರತ 2047  ಗುರಿಯನ್ನು  ತಲುಪುವಲ್ಲಿ ಯುವಕರ ಭೂಮಿಕೆಯನ್ನು ಉತ್ತೇಜಿಸುವ ಮತ್ತು ಅವರ ಯೋಚನೆಗಳನ್ನು ಹಂಚಿಕೊಳ್ಳಲು ಉದ್ದೇಶಿಸಿರುವ ಈ ಕಾರಗಯಕ್ರಮದಲ್ಲಿ startup india  ಮಹಿಳಾ ನೇತೃತ್ವ, ಪಾರದರ್ಶಕ ಆಡಳಿತ, ಸಾಂಸ್ಕೃತಿಕ ಪ್ರಭಾವ ಮತ್ತು ಅವಿಷ್ಕಾರ ಮೊದಲಾದ ವಿವಿಧ ಮಹತ್ವದ ಥೀಮ್ ಆಧಾರಿತ ಚರ್ಚೆಗಳು ನಡೆಯಲಿವೆ.

ಗುಂಪು ಚರ್ಚೆಗಳಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾರತದ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ ಪ್ರೀತ್ ಕೌರ್ ಬ್ಯಾಡ್ಮಿಂಟನ್ ಆಟಗಾರ ಪುಲ್ಲಿಲ ಗೋಪಿಚಂದ್ ಖ್ಯಾತ ಸಂವಹನ ತಜ್ಙೆ ಪಲ್ಕಿ ಶರ್ಮಾ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ . ಜನವರಿ 12ರಂದು  ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅನುಭವ ಮತ್ತು ಮಾರ್ಗದರ್ಶನ ಹಂಚಿಕೊಳ್ಳಲಿದ್ದಾರೆ ಈ ಸಂವಾದವು ಯುವ ಪೀಳಿಗೆಗೆ ರಾಷ್ಟ್ರದ ಗುರಿಗಳನ್ನು ರೂಪಿಸಲು ಪ್ರೇರಣೆ ನೀಡಲಿದೆ.

ಇವರು ರೇಷ್ಮಾ ಶೆಟ್ಟಿ ಹಾಗೂ ಉದಯ ಕುಮಾರ್ ಶೆಟ್ಟಿ ಇನ್ನ ಇವರ ಪುತ್ರಿಯಾಗಿದ್ದಾರೆ

Related posts

ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಭಾನು ಭಾಸ್ಕರ ಪೂಜಾರಿ

Madhyama Bimba

ಕಡ್ತಲದ ಶತಾಯುಷಿ ಶ್ರೀಮತಿ ಕಮಲ ನಿಧನ

Madhyama Bimba

ಶ್ರೀ ಕ್ಷೇತ್ರ ನೆಲ್ಲಿಯ ಜಾತ್ರಾ ಮಹೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More