ಬೈಲೂರು ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್ನಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಯನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಲಿಖಿತ ಪತ್ರ ನೀಡಿರುವ ಅವರುಈ ಪಾರ್ಕ್ನಲ್ಲಿ ಸಿಟಿ ಕ್ಯಾಮೆರಾ ಅಳವಡಿಸುವುದು, ಭದ್ರತಾ ದೃಷ್ಟಿಯಿಂದ ಕಾವಲುಗಾರ ನಿಯೋಜಿಸುವುದು, ಅಧಿಕೃತ ವ್ತಕ್ಯಿಗಳನ್ನು ಹೊರತುಪಡಿಸಿ ಸಾರ್ವಜನಿಕ ಪ್ರವೇಶ ನಿಷೇಧ, ಥೀಮ್ ಪಾರ್ಕ್ ರಸ್ತೆಯಲ್ಲಿ ಸ್ವಚ್ಛತೆ, ಅಲ್ಲಿರುವ ಅಮೂಲ್ಯ ವಸ್ತುಗಳು, ಥೀಮ್ ಪಾರ್ಕ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಸಂಪೂರ್ಣ ಜವಾಬ್ದಾರಿ ಮಾಡುವಂತೆ ಜಿಲ್ಲಾಡಳಿತ ಆದೇಶದಲ್ಲಿ ತಿಳಿಸಿದೆ.
ಥೀಮ್ ಪಾರ್ಕ್ ಪ್ರದೇಶಕ್ಕೆ ಯಾರಾದರೂ ಅತಿಕ್ರಮಣ ಮಾಡಿದರೆ ಅವರ ವಿರುದ್ಧ ಕಠಿಣ ಕಾನೂಕು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

