ಬ್ಯಾಂಕ್ ಆಫ್ ಬರೋಡ ಪ್ರವರ್ತಿತ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ (ರಿ) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕಡ್ತಲ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ 15 ದಿನಗಳ ಆರಿ ಕೌಶಲ್ಯ ತರಬೇತಿ ಉದ್ಘಾಟನೆ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಡ್ತಲ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಸುಕೇಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಸುರೇಖಾ, ವಿಜಯ ಗ್ರಾಮೀಣಾಭೀವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿರಾಜ್, ಭಾರತೀಯ ವಿಕಾಸ್ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್, ಕಡ್ತಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರೇವತಿ ವಾರಿಕ್, ಕಾರ್ಕಳ ತಾಲೂಕಿನ ಎಫ್ಎಲ್ಸಿ, ಕಾರ್ಕಳ ಸುಮೇಧಾ ಫ್ಯಾಷನ್ ಸಂಸ್ಥೆಯ ಸ್ಥಾಪಕರಾದ ಶ್ರೀಮತಿ ಸಾಧನ ಜಿ ಎ ಇವರು ಉಪಸ್ಥಿತರಿದ್ದರು.
ಎಂ ಬಿ ಕೆ ಶ್ರೀಮತಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ಗುಮಾಸ್ತರಾದ ಶ್ರೀಮತಿ ಮನಿಷಾ ಧನ್ಯವಾದ ಸಲ್ಲಿಸಿದರು.
