ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಜಾತಿ ಜಾತಿಗಳ ಮಧ್ಯೆ ವೈಷಮ್ಯ ತರುವ ಸಂದೇಶ ಹರಿಯ ಬಿಟ್ಟ ವ್ಯಕ್ತಿಯೋರ್ವರ ಮೇಲೆ ಕೇಸು ದಾಖಲಾದ ಘಟನೆ ವರದಿಯಾಗಿದೆ.

ಸಂತೋಷ ದೇವಾಡಿಗ ಎಂಬವರ ಫೇಸ್ಬುಕ್ ಐಡಿಯಲ್ಲಿ “ಪರಶುರಾಮ ಥೀಮ್ ಪಾರ್ಕ್ ಕಳ್ಳತನಕ್ಕೆ ಟ್ವಿಸ್ಟ್, ಥೀಮ್ ಪಾರ್ಕ್ ಕಟ್ಟಡ ಒಳಗಿನ ಫ್ಯಾನ್ ಎಲೆಕ್ಟ್ರಿಕಲ್ ಉಪಕರಣಗಳನ್ನು ಮೊದಲೇ ಎಗರಿಸಿದ ಆರ್ಎಸ್ಎಸ್ ಕಾರ್ಯಕರ್ತ” ಎಂಬ ಬರವಣಿಗೆಯ ಪೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಜಾತಿ ಧರ್ಮ ಸಂಘರ್ಷ ಹುಟ್ಟು ಹಾಕಿ ಸಮಾಜದಲ್ಲಿ ಅಶಾಂತಿಯನ್ನು ಕ ಬೆಳಸಿ ಆ ಮೂಲಕ ರಾಜಕೀಯ ದುರ್ಲಾಭ ಪಡೆಯುವ ಉದ್ದೇಶದಿಂದ ಈ ಸಂಧೇಶವನ್ನು ಫೇಸ್ ಬುಕ್ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
