ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳ್ಳತನ ಮಾಡಿರುವ ಮತ್ತೆ ಇಬ್ಬರು ವ್ಯಕ್ತಿಗಳ ಮೇಲೆ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.
ಮಂಜುನಾಥ್ ಜೋಗಿ ಎಂಬವರು ನೀಡಿದ ದೂರಿನ ಮೇಲೆ ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದು ಕಳ್ಳತನ ಮಾಡಿದ ವ್ಯಕ್ತಿಗಳು ಯಾರೆಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಕಳೆದ ವಾರ ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಸಾಮಗ್ರಿಗಳು ಕಳ್ಳತನ ಆದಾಗ ಮಂಗಳೂರುವಿನ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.
ಅಂತೂ ಈ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಆರಂಭಗೊಂಡ ಬಳಿಕ ಒಂದಲ್ಲ ಒಂದು ಸಮಸ್ಯೆಯಿಂದಾಗಿ ಸುದ್ದಿ ಆಗುತ್ತಲೇ ಇದೆ.
previous post
next post
