ಕಾರ್ಕಳ: ಕುಕ್ಕುಂದೂರು ಜೋಡುರಸ್ತೆ ಕುಲಾಲ್ ಮಂದಿರದ ಬಳಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾದ ಘಟನೆ ಜ. 24ರಂದು ವರದಿಯಾಗಿದೆ.

ಕೇರಳ ಕೊಜಿಕೊಡ ನಿವಾಸಿ ಸೂರ್ಯನ್ ಗಾಯಗೊಂಡವರು.
ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಕಾರಿನ ಚಾಲಕ ಮೊಹಮ್ಮದ್ ಹನೀಫ್ ತನ್ನ ಕಾರನ್ನು ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ನಿಂತುಕೊಂಡಿದ್ದ ಸೂರ್ಯನ್ ರವರಿಗೆ ಢಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ಪರಿಣಾಮ ಸೂರ್ಯನ್ರವರು ಡಾಮಾರು ರಸ್ತೆಗೆ ಬಿದ್ದು, ತಲೆಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ರಕ್ತ ಗಾಯವಾಗಿದೆ.
ಚಿಕಿತ್ಸೆಯಗಾಗಿ ಕಾರ್ಕಳ ಟಿಎಮ್ ಎ ಪೈ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಅಸ್ಪತ್ರೆಗೆ ನಂತರ ಮಂಗಳೂರು ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
