ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ : ಆಮಂತ್ರಣ ಪತ್ರಿಕೆ ಬಿಡುಗಡೆ

ಹೆಬ್ರಿ : ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ನಾಗಬನದಲ್ಲಿ ಫೆಬ್ರವರಿ 19 ರಿಂದ 21ರ ವರೆಗೆ ನಡೆಯಲಿರುವ ಪಾರಂಪಾರಿಕ ಏಕಪವಿತ್ರ ಶ್ರೀಮನ್ನಾಗಮಂಡಲದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಕಟಪಾಡಿ ಆನೆಗೊಂದಿ‌ ಮಹಾಸಂಸ್ಥಾನದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಬಿಡುಗಡೆ ಮಾಡಿದರು.

ಪ್ರಕೃತಿಯ ಆರಾಧನೆಯೊಂದಿಗೆ ಪಾರಂಪರಿಕ ಸಂಪ್ರದಾಯದೊಂದಿಗೆ ನಾಗಮಂಡಲವನ್ನು ಡಾ. ಜಿ. ರಾಮಕೃಷ್ಣ ಆಚಾರ್ ಮಾಡುವ ಸಂಕಲ್ಪ ಮಾಡಿರುವುದು ಅತೀವವಾದ ಸಂತೋಷದ ವಿಚಾರ. ಇದೊಂದು ಅಪರೂಪದ ಕಾರ್ಯಕ್ರಮ. ಸಮಸ್ತ ಹಿಂದೂ ಸಮಾಜ ಬಾಂಧವರು ನಾಗಮಂಡಲದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು.

ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್, ಟ್ರಸ್ಟಿ ಸವಿತಾ ರಾಮಕೃಷ್ಣ ಆಚಾರ್, ಏಕಪವಿತ್ರ ಶ್ರೀಮನ್ನಾಗಮಂಡಲದ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಮೂಡಬಿದರೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವಕರ್ಮ ಸಮಾಜದ ಪ್ರಮುಖರಾದ ಶ್ರೀಧರ ಆಚಾರ್ಯ, ದಾಮೋದರ ಶರ್ಮ ಬಾರ್ಕೂರು, ವಿಶ್ವಕರ್ಮ ಸಮಾಜದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

Related posts

ವಸತಿ ಶಾಲೆಯ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Madhyama Bimba

ಸುಂದರ ಕೋಟ್ಯಾನ್ ಪಂಜಿಕುಡೇಲು ನಿಧನ

Madhyama Bimba

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More