ಕಾರ್ಕಳಹೆಬ್ರಿ

ಹೆಬ್ರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆ

ಹೆಬ್ರಿ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಾಗಿ ಜನರಿಂದ ಅರ್ಜಿಗಳು ಬಂದರೆ ಶೀಘ್ರವಾಗಿ ಪರಿಶೀಲನೆ ನಡೆಸಿ ಹೆಚ್ಚಿನ ಜನರಿಗೆ ಗ್ಯಾರಂಟಿ ಯೋಜನೆಯ ಪ್ರಯೋಜನ ಸಿಗುವಂತೆ ಮಾಡಬೇಕು ಎಂದು ಹೆಬ್ರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಂಕರ ಸೇರಿಗಾರ್ ಹೇಳಿದರು.


ಅವರು ಸಮಾಜಮಂದಿರದಲ್ಲಿ ನಡೆದ ಹೆಬ್ರಿ ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೆಬ್ರಿ ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಾರ್ಯದರ್ಶಿಯಾಗಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಯೋಜನೆಗೆ ಹೊಸ ಅರ್ಜಿಗಳು ಬಂದರೆ ಸಕಾಲದಲ್ಲಿ ಇತ್ಯರ್ಥ ಮಾಡಿ ಯೋಜನೆಯನ್ನು ಜನತೆಗೆ ತಲುಪಿಸಿ ಎಂದು ಸೂಚಿಸಿದರು.


21 ಮಂದಿ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ನೀಡಲಾಗಿದೆ ಎಂದು ಆಹಾರ ನಿರೀಕ್ಷಕ ಗುರುಪ್ರಸಾದ್ ತಿಳಿಸಿದರು. ಮೆಸ್ಕಾಂ ಹೆಬ್ರಿ ಉಪ ವಿಭಾಗದ ವ್ಯಾಪ್ತಿಯಲ್ಲಿ 14437 ಫಲಾನುಭವಿಗಳು 80 ಲಕ್ಷ ರೂಪಾಯಿ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಮೆಸ್ಕಾಂ ಎಇಇ ನಾಗರಾಜ್ ಮಾಹಿತಿ ನೀಡಿದರು.

ಹೆಬ್ರಿ ಕಾರ್ಕಳ, ಹೆಬ್ರಿ ಕಬ್ಬಿನಾಲೆ ಮುನಿಯಾಲು ಶಿರ್ಲಾಲು ಕಾರ್ಕಳ ಮತ್ತು ಹೆಬ್ರಿ ಮಡಾಮಕ್ಕಿ ಸಿದ್ಧಾಪುರ ಅಮಾಸೆಬೈಲು ಮಾರ್ಗದಲ್ಲಿ ಶೀಘ್ರವಾಗಿ ಸರ್ಕಾರಿ ಬಸ್ ಓಡಿಸುವ ಪ್ರಸ್ತಾವನೆಯನ್ನು ಮಂಜೂರುಗೊಳಿಸುವಂತೆ ಸಮಿತಿಯ ಸದಸ್ಯರು ಹಾಗೂ ಅಧ್ಯಕ್ಷ ಶಂಕರ ಸೇರಿಗಾರ್ ಮನವಿ ಮಾಡಿದರು. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಿಂಗಳಿನಲ್ಲಿ ಒಮ್ಮೆ ಕುಚ್ಚಿಗೆ ಮತ್ತೊಮ್ಮೆ ಬೆಳ್ತಿಗೆ ಅಕ್ಕಿಯನ್ನು ರೊಟೇಷನ್ ಮಾದರಿಯನ್ನು ವಿತರಿಸಬೇಕು. ಇದರಿಂದ ಜನತೆಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂತು. ಸದಸ್ಯರ ಅಭಿಪ್ರಾಯವನ್ನು ಸರ್ಕಾರ ಮತ್ತು ಆಹಾರ ಇಲಾಖೆಗೆ ತಲುಪಿಸುವಂತೆ ಅಧ್ಯಕ್ಷ ಶಂಕರ ಸೇರಿಗಾರ್ ಸೂಚಿಸಿದರು.

ಪಂಚಾಯಿತಿರಾಜ್ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಇ.ಡಿ, ಆಹಾರ ನಿರೀಕ್ಷಕ ಗುರುಪ್ರಸಾದ್, ಹೆಬ್ರಿ ಮೆಸ್ಕಾಂ ಎಇಇ ನಾಗರಾಜ್, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವೀಚಾರಕಿ ರೇವತಿ, ಶ್ರೀಮತಿ, ಕೆಎಸ್ ಆರ್ ಟಿಸಿಯ ಭೋಜ ಕಾರ್ಕಳ, ಹೆಬ್ರಿ ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಸಾವಿತ್ರಿ ನಾಯ್ಕ್, ಶಶಿಕಲಾ ಆರ್ ಪಿ, ರಘುನಾಥ ಪೂಜಾರಿ, ವಸಂತ ಪೂಜಾರಿ, ರಾಜು ಪೂಜಾರಿ, ಜಗದೀಶ ಹೇರಳೆ, ತಾಲ್ಲೂಕು ಪಂಚಾಯಿತಿಯ ಲತಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ದಿನೇಶ್ ಇ. ಡಿ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ಕೆರ್ವಾಶೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಣ್ಣ ತಂದ ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

Madhyama Bimba

ಕ್ರೈಸ್ಟ್‌ಕಿಂಗ್: ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Madhyama Bimba

ನಿಟ್ಟೆ ಡಾ. ವಿನಯ ಹೆಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More