ಮುದ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಣಕಾಸು ಸಾಕ್ಷರತಾ ಸಪ್ತಾಹ 2026ಕಾರ್ಯಕ್ರಮ ಫೆ. 12 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಸಂತಿ ಪೂಜಾರಿ iವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಡುಪಿ ಪ್ರಾದೇಶಿಕ ಮುಖ್ಯಸ್ಥರಾದ ಅಶೋಕ ಅಂಬಾಸಾ ಭಾಂಡಗೆ ಯವರು ಆಗಮಿಸಿ ಆನ್ ಲೈನ್ ಮೂಲಕ ಮೋಸ, ಬ್ಯಾಂಕಿಂಗ್ ಸೇವೆಯ ಸವಲತ್ತುಗಳ ಕುರಿತು, ಕೆವೈಸಿ ಸುರಕ್ಷಿತ ಬ್ಯಾಂಕಿಂಗ್ ಕುರಿತು ವಿಡಿಯೋ ಪ್ರದರ್ಶನ ಮಾಡುವ ಮೂಲಕ ಸಮಗ್ರವಾದ ಮಾಹಿತಿಯನ್ನು ನೀಡಿದರು.
ಕಾಯರ್ಕ್ರಮದಲ್ಲಿ ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುದ್ರಾಡಿ ಶಾಖೆಯ ಪ್ರಭಂದಕರು, ಬ್ಯಾಂಕ್ ಸಿಬ್ಬಂದಿ ವರ್ಗ, ಬ್ಯಾಂಕ್ ಮಿತ್ರರು, ಪಂಚಾಯತ್ ಅಭಿವೃಧ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.
