ಮೂಡುಬಿದಿರೆ

ದರೆಗುಡ್ಡೆ ಸೋಮನಾಥೇಶ್ವರ ಸಂಜೀವಿನಿ ಒಕ್ಕೂಟದಿಂದ ಪಂಚಾಯತ್ ಜನಪ್ರತಿನಿಧಿಗಳಿಗೆ ಅಭಿನಂದನೆ

ದರೆಗುಡ್ಡೆ: ಸೋಮನಾಥೇಶ್ವರ ಸಂಜೀವಿನಿ ಮಾದರಿ ಒಕ್ಕೂಟ ತನ್ನ ಕ್ರಿಯಾಶೀಲತೆಯ ಮೂಲಕ ಮಾದರಿಯಾಗಿ ಹೊರಹೊಮ್ಮಿರುವುದು ದರೆಗುಡ್ಡೆ ಗ್ರಾಮಪಂಚಾಯತ್‌ಗೆ ಹೆಮ್ಮೆಯ ಸಂಗತಿ ಎಂದು ದರೆಗುಡ್ಡೆ ಗ್ರಾಮಪಂಚಾಯತ್‌ನ ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

ದರೆಗುಡ್ಡೆ ಗ್ರಾಮಪಂಚಾಯತ್ ಮಟ್ಟದ ಸೋಮನಾಥೇಶ್ವರ ಸಂಜೀವಿನಿ ಮಾದರಿ ಒಕ್ಕೂಟದ ವತಿಯಿಂದ ಇಂದು ಗ್ರಾಮಪಂಚಾಯತ್‌ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ ಜನಪ್ರತಿನಿಧಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ಮಹಿಳೆಯರು ಹೆಚ್ಚು ಕ್ರಿಯಾಶೀಲರಾದಷ್ಟೂ ಗ್ರಾಮದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಪಂಚಾಯತ್ ಆಡಳಿತದಿಂದ ಲಭಿಸಿದ ಸರ್ವ ರೀತಿಯ ಸಹಕಾರದಿಂದ ಒಕ್ಕೂಟವು ಸುಸಜ್ಜಿತ ಕಟ್ಟಡದಲ್ಲಿ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮುಂದಿನ ದಿನಗಳಲ್ಲಿಯೂ ಒಕ್ಕೂಟ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಪಂಚಾಯತ್‌ನ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ, ಉಪಾಧ್ಯಕ್ಷೆ ನಳಿನಿ ಹಾಗೂ ಸದಸ್ಯರಾದ ಶಾಲಿನಿ, ಸಂತೋಷ್ ಪೂಜಾರಿ, ಶಶಿಕಲಾ, ಸುಭಾಷ್ ಚಂದ್ರ ಚೌಟ, ಪ್ರಸಾದ್, ಮುನಿರಾಜ್, ತುಳಸಿ ಮೂಲ್ಯ, ಜನಿತಾ ಮತ್ತು ದೀಕ್ಷಿತ್ ಅವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಗ್ರಾಮಪಂಚಾಯತ್ ಕಾರ್ಯದರ್ಶಿ ಸುನಂದ, ಒಕ್ಕೂಟದ ಕಾರ್ಯದರ್ಶಿ ಸವಿತಾ, ಸಿಬ್ಬಂದಿಗಳಾದ ಸುನೀತ, ದೀಕ್ಷಿತಾ ಮತ್ತು ಸುಕನ್ಯ ಉಪಸ್ಥಿತರಿದ್ದರು. ಎಂಬಿಕೆ ಮಾನಸ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಮುದಾಯ ಸಂಪನ್ಮೂಲ ವ್ಯಕ್ತಿ ಲವೀನಾ ವಂದಿಸಿದರು.

Related posts

ಆದರ್ಶ ಬೆಳ್ಳಿ ಹಬ್ಬ, ವಿಶೇಷ ಚೇತನರ ಸಮಾವೇಶ

Madhyama Bimba

‘ಆಳ್ವಾಸ್ ಪದವಿ ಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ’- ಎಸ್.ಎಸ್.ಎಲ್.ಸಿ. ಸಿಬಿಎಸ್‌ಇ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ

Madhyama Bimba

ಸಿಪ್ರಿಯನ್ ಪಿಂಟೋ ಇನ್ನಿಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More