ಕಾರ್ಕಳ: ಯವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 19ರಂದು ವರದಿಯಾಗಿದೆ.
ಯರ್ಲಪಾಡಿಯ ಸುಹೇಶ್ (22) ಮೃತಪಟ್ಟವರು.
ಇವರಿಗೆ ೧೫ ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು ಔಷಧಿ ಮಾಡುತ್ತಿದ್ದರು. ಮನೆಯಲ್ಲಿ ಕುಳಿತಿದ್ದವರು ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ ಬಿದ್ದು ನರಳಾಡಿ ತೀವ್ರ ಅಸ್ವಸ್ಥರಾದರು. ಇವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಫತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷಿಸಿ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
