ಕಾರ್ಕಳ: ವ್ಯಕ್ತಿಯೋರ್ವರು ಮನೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಮುಂಡ್ಕೂರು ಕುದ್ರೆಬೆಟ್ಟು ನಿವಾಸಿ ರಮೇಶ್ (62) ಮೃತಪಟ್ಟವರು.
ರಮೇಶ್ರವರು ಹೊಟೆಲ್ ಸಪ್ಲೇಯರ್ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ಇವರಿಗೆ ವಿಪರೀತ ಮಧ್ಯಪಾನ ಮಾಡುವ ಅಭ್ಯಾಸವಿದ್ದು, ಮನೆಯ ರೂಮಿನ ಮೂಲೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಇದ್ದು ಮಾತನಾಡಿಸಿದರೆ ಮಾತನಾಡದೇ ಇದ್ದಾಗ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
