ಕಾರ್ಕಳಹೆಬ್ರಿ

ಕಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಲಾರಿ ಡಿಕ್ಕಿ-ಗಾಯ

ಕಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಫೆ. 19ರಂದು ವರದಿಯಾಗಿದೆ.

ಅಜ್ಮಲ್ ಗಾಯಗೊಂಡವರು.

ಹೆಜಮಾಡಿಯ ಯತೀಶ (34) ಹಾಗೂ ಅಜ್ಮಲ್‌ರವರು ಬೊಲೆರೋ ಪಿಕ್ ಅಪ್ ವಾಹನದಲ್ಲಿ ಪಡುಬಿದ್ರೆ ಕಡೆಗೆ ಬರುತ್ತಿರುವಾಗ ಬೆಳ್ಮಣ್ ಪೆರಾಲ್‌ಪಾದೆ ಬಳಿ ಪಿಕ್ ಅಪ್ ವಾಹನದಲ್ಲಿ ಸಮಸ್ಯೆ ಉಂಟಾದ ಕಾರಣ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಿಶೀಲಿಸುತ್ತಿರುವಾಗ ಅಜ್ಮಲ್ ರವರು ವಾಹನದ ಹಿಂಭಾಗದಲ್ಲಿ ನಿಂತುಕೊಂಡಿದ್ದರು. ಈ ಸಂದರ್ಭ ಕಂಟೇನರ್ ಲಾರಿ ಚಾಲಕ ಅಬ್ಬಾಸ್ ಅತೀವೇಗ ಚಲಾಯಿಸಿಕೊಂಡು ಬಂದು ಅಜ್ಮಲ್ ರವರಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಅಜ್ಮಲ್ ಗಾಯಗೊಂಡಿರುತ್ತಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ವಿಶೇಷ ಠೇವಣಿ ಯೊಜನೆಯ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ಸಂಗ್ರಹ

Madhyama Bimba

ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮ ಸಂಪನ್ನ

Madhyama Bimba

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಶ್ರೀರಾಮ ತಾರಕ ಜಪಯಜ್ಞ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More