ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಮಣಿರಾಜ್ ಶೆಟ್ಟಿಯವರನ್ನು ರಾಜ್ಯ ಬಿಜೆಪಿ ಆಯ್ಕೆ ಮಾಡಿದೆ.
ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮಣಿರಾಜ್ ಶೆಟ್ಟಿ ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ 2 ಬಾರಿ, 4 ಬಾರಿ ತಾಲೂಕು ಬಿಜೆಪಿ ಅಧ್ಯಕ್ಷರಾಗಿ, ಯುವ ಮೋರ್ಚಾ ಅಧ್ಯಕ್ಷರಾಗಿ ಹೀಗೆ ಹಲವಾರು ಬಾರಿ ಬಿಜೆಪಿ ಪಕ್ಷದ ವಿವಿಧ ಘಟಕಗಳಲ್ಲಿ ಕಳೆದ 40 ವರ್ಷಗಳಿಂದ ಸೇವೆ ಮಾಡಿದ್ದಾರೆ
