ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಚಿವರಾದ ವಿ ಸುನೀಲ್ ಕುಮಾರ್ ಅವರ ಒತ್ತಾಸೆಯಿಂದ ಕಾರ್ಕಳದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ಸ್ಥಾಪನೆಗೆ ಶಂಕು ಸ್ಥಾಪನೆಯಲ್ಲಿ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಶಾಸಕ ಸುನಿಲ್ ಕುಮಾರ್ ರ ಭಾವಚಿತ್ರವನ್ನು ಅವಗಣನೆ ಮಾಡಿದೆ ಎಂದು ಕಾರ್ಕಳ ಬಿಜೆಪಿ ಆಕ್ರೋಶ ಹೊರ ಹಾಕಿದೆ.
ಈ ಕಾಮಗಾರಿ ಆಗಲು ಅನುದಾನವನ್ನು ಶಾಸಕ ಸುನಿಲ್ ಕುಮಾರ್ ರವರು ಮಂಜೂರು ಮಾಡಿದ್ದರು. ಆದರೆ ಈ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ.
ಸ್ಥಳೀಯ ಶಾಸಕರು ಹಾಗೂ ಸಂಸದರ ಭಾವಚಿತ್ರ ಹಾಕದೇ ಸಿಎಂ,ಡಿಸಿಎಂ ಹಾಗೂ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಮಾತ್ರ ಹಾಕಲಾಗಿದೆ. ಇದನ್ನು ಖಂಡಿಸಿ ನಾಳೆ ಬಿಜೆಪಿವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ .
