ಹೆಬ್ರಿ: ಅನಾರೋಗ್ಯದ ವಿಚಾರವಾಗಿ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26ರಂದು ವರದಿಯಾಗಿದೆ.
ಶಿವಪುರದ ಪೂವಪ್ಪ ಪೂಜಾರಿ (83) ಆತ್ಮಹತ್ಯೆ ಮಾಡಿಕೊಂಡವರು.
ಇವರಿಗೆ ವಿಪರೀತ ಬೀಡಿ ಸೇದುವ ಚಟ ಹೊಂದಿದ್ದು, ಕ್ಯಾನ್ಸರ್, ಶ್ವಾಸಕೋಶ ತೊಂದರೆ ಮತ್ತು ಬಿಪಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ವಿಚಾರವಾಗಿ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
