ಕಾರ್ಕಳ: ಕಾರ್ಕಳ ತಾಲೂಕು ಅಟೋ ಚಾಲಕರ ಮಾಲಕರ ಸಂಘದ ಅಧ್ಯಕ್ಷರಾಗಿ ಖ್ಯಾತ ನ್ಯಾಯವಾದಿ ಬಿ .ಸದಾನಂದ ಸಾಲಿಯಾನ್ ಆಯ್ಕೆಯಾಗಿದ್ದಾರೆ. ಮಾ. 2ರಂದು ಕಾರ್ಕಳದ ಮನ್ನಾರ ದೇವಸ್ಥಾನದಲ್ಲಿ ನಡೆದ ಅಟೋ ಚಾಲಕ ಮಾಲಕ ಸಂಘದ ಸಾಮಾನ್ಯ ಸಭೆಯಲ್ಲಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸುಮಾರು 20 ವರ್ಷಗಳಿಂದ ನ್ಯಾಯವಾದಿಗಳಾಗಿ ಕಾರ್ಕಳ ಹಾಗೂ ಬೈಲೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕಾರ್ಕಳ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಂತಿ ಯುವಕ ವೃಂದ ಜಾರ್ಕಳ ಕುಕ್ಕುಂದೂರು ಇದರ ಅಧ್ಯಕ್ಷರಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಮೃತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾಗಿ, ಕರಕರಿ ಫ್ರೆಂಡ್ಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
