ಕಾರ್ಕಳ: ಚಲಿಸುತ್ತಿದ್ದ ಸ್ಕೂಟಿಯಿಂದ ಬಿದ್ದು ಮಹಿಳೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಫೆ. 28ರಂದು ವರದಿಯಾಗಿದೆ.
ಪೂರ್ಣಿಮಾ ಗಂಭೀರ ಗಾಯಗೊಂಡವರು.
ಸ್ಕೂಟಿ ಸವಾರ ರಾಜು ಪೂರ್ಣೀಮಾರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್ನ ವಿಶಾಲ್ ಗ್ಯಾರೇಜ್ ಬಳಿ ಸ್ಕೂಟಿಯನ್ನು ಅತೀ ವೇಗದಿಂದ ಚಲಾಯಿಸಿದ ಪರಿಣಾಮ ಪೂರ್ಣೀಮಾರವರು ಹಿಮ್ಮುಖವಾಗಿ ರಸ್ತೆಯ ಮೇಲೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿರುತ್ತದೆ.
ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಫತ್ರೆಗೆ ದಾಖಲಿಸಿರುವುದಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
