ಶಿರ್ಲಾಲು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ.) ಶಿರ್ಲಾಲು ಇದರ ವತಿಯಿಂದ ಸುಸ್ಸಜ್ಜಿತವಾದ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು ಶಾಸಕರು ಹಾಗೂ ಸಮಾಜ ಬಾಂಧವರ, ದಾನಿಗಳ ಸಹಕಾರದಿಂದ ಸುಮಾರು 1 ಕೋಟಿ ರೂ, ವೆಚ್ಚದಲ್ಲಿ ಭವ್ಯವಾದ ನಾರಾಯಣ ಗುರು ಮಂದಿರ ಹಾಗೂ ಸಭಾಂಗಣವು ಮಾ. 07ಮತ್ತು 08ರಂದು ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಗೊಳ್ಳಲಿದೆ.

ಪರಮಪೂಜ್ಯ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠ ಬೆಂಗಳೂರು ಹಾಗೂ ಶ್ರೀ ಕೃಷ್ಣ ಕ್ಷೇತ್ರದ ಪ್ರಧಾನ ಅರ್ಚಕರಾದ ಸದಾನಂದ ಶಾಂತಿ ಇವರ ನೇತೃತ್ವದಲ್ಲಿ ವಿಧಿ ವಿಧಾನಪೂರ್ವಕ ನೆರವೇರಲಿರುವುದು.
ಈ ಪ್ರಯುಕ್ತ ಹಸಿರು ಹೊರೆಕಾಣಿಕೆ, ಬ್ರಹ್ಮಶ್ರೀ ನಾರಾಯಣಗುರುಗಳ ಪ್ರತಿಮೆ ಪ್ರತಿಷ್ಠಾಪನೆ, ಧಾರ್ಮಿಕ ವಿಧಿ ವಿಧಾನಗಳು ಸಭಾ ಕಾರ್ಯಕ್ರಮ ಹಾಗೂ ಬಿಲ್ಲವ ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
