ಮೂಡುಬಿದಿರೆ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕೊಡಂಗಲ್ಲು ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಉದ್ಯಮಿ ಕೆ ಶ್ರೀಪತಿ ಭಟ್, ಚೌಟರ ಅರಮನೆ ಕುಲದೀಪ್ ಎಂ. ತೆಂಗಿನ ಕಾಯಿ ಒಡೆದು ಚಾಲನೆಗೊಳಿಸಿದರು.

ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ಕೊರಗಪ್ಪ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಹೆಗ್ಡೆ, ಸೀತಾರಾಮ ಆಚಾರ್ಯ, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಕಾರ್ಯದರ್ಶಿಗಳಾದ ಅಮರ್ ಕೋಟೆ, ಸತೀಶ್ ಕೋಟ್ಯಾನ್, ಆಡಳಿತ ಮಂಡಳಿ ಅಧ್ಯಕ್ಷರಾದ ದೇಜು, ಕಾರ್ಯದರ್ಶಿ ಸಂದೀಪ್, ಬ್ರಹ್ಮಕಲಶೋತ್ಸವ ಪ್ರಮುಖರಾದ ಧೀರಜ್ ಕೆ. , ಅಮೃತ್ ರಾಜ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
