ಪೊಸ್ರಾಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದಂದು ಡಾ. ವಿಶ್ವತ್ ಶೆಟ್ಟಿ ಎಂಬವರ ಮೇಲೆ ಸೋಮನಾಥ್ ಪೂಜಾರಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಆಗಿದೆ.
ಪೊಸ್ರಾಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ರಾತ್ರಿ ಡಾ. ವಿಶ್ವತ್ ಶೆಟ್ಟಿ ಎಂಬವರು ತನ್ನ 7 ವರ್ಷದ ಮಗು ಹಾಗೂ ಸಹೋದರ ಪ್ರಸಾದ್ ಶೆಟ್ಟಿ ಅವರೊಂದಿಗೆ ನಿಂತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಸೋಮನಾಥ ಪೂಜಾರಿಯವರು ಡಾ. ವಿಶ್ವತ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಮಾಡಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಸೋಮನಾಥ ಪೂಜಾರಿಯವರನ್ನು ಪ್ರಸಾದ್ ಶೆಟ್ಟಿ ಎಂಬವರು ತಡೆದು ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
