ಕಾರ್ಕಳ

ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯ

ಕಾರ್ಕಳ ಪುರಸಭೆಯ ಕುಂಟಲ್ಪಾಡಿ ಪ್ರದೇಶದಲ್ಲಿ ಏಳು ದಿನಗಳಿಂದ ಜನರಿಗೆ ನೀರು ಇಲ್ಲದೆ ಸಮಸ್ಯೆಯಾಗಿದ್ದು ಸ್ಥಳೀಯರು ಶಾಸಕರಾದ ವಿ. ಸುನೀಲ್ ಕುಮಾರ್ ಅವರ ಕಛೇರಿಗೆ ತೆರಳಿ ನೀರಿನ ಸಮಸ್ಯೆಯನ್ನು ಹೇಳಿಕೊಂಡಾಗ ತಕ್ಷಣವೇ ಪುರಸಭೆಯ ಮುಖ್ಯ ಅಧಿಕಾರಿಗಳಿಗೆ ಫೋನಾಯಿಸಿ ಆ ಪ್ರದೇಶಕ್ಕೆ ಕೂಡಲೇ ನೀರು ನೀಡುವಂತೆ ಸ್ಪಂದಿಸಬೇಕು ಎಂದು ಹೇಳಿದರು.

ನಂತರ ಮಾಜಿ ಪುರಸಭಾ ಸದಸ್ಯರಾದ ಸುನೀಲ್ ಕೋಟ್ಯಾನ್, ಪ್ರಕಾಶ್ ರಾವ್ ರವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಪುರಸಭೆಯ ಮುಖ್ಯ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

ಇಂದು ಸಾಯಂಕಾಲದ ಒಳಗೆ ಬಾವಿಯ ಪಂಪನ್ನು ಸರಿಪಡಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ರಾಜೇಶ್ ಕೋಟ್ಯಾನ್, ಅಮರ್ ಶೆಟ್ಟಿಗಾರ್, ಶೇಖರ್, ಕಾರ್ತಿಕ್, ಶಾಂತ ಪೂಜಾರ್ತಿ, ವಿನೋದ್ ದೇವಾಡಿಗ, ಬೇಬಿ ಪೂಜಾರ್ತಿ, ನಾಗೇಶ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ

Madhyama Bimba

ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮೂಡಬಿದ್ರಿ ಅಂತರ್ ಜಿಲ್ಲಾ ಜಂಟಿ ಸಭೆ

Madhyama Bimba

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More