ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಮಹಿಳೆಯರ ವಿರುದ್ಧ ನಡೆಸಿದ ದೌರ್ಜನ್ಯ ಆರೋಪಗಳ ತನಿಖೆಯನ್ನು ಸಿ.ಐ.ಡಿ.ಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಸೂಚಿಸಿದ್ದಾರೆ.
ಸಂದೇಶ್ ಅವರಿಂದ ದೌರ್ಜನ್ಯ ನಡೆದಿದೆ ಎಂದು ಇತ್ತೀಚೆಗೆ ಕೆಲವು ಮಹಿಳೆಯರು ಆರೋಪಿಸಿದ್ದರು. ಅದು ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು.
