ಮೂಡುಬಿದಿರೆ ಪ್ರಾಂತ್ಯ ಗ್ರಾಮದ ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ರವಿಪ್ರಸಾದ್ ಕೆ.ಶೆಟ್ಟಿ ನಿಯುಕ್ತರಾಗಿದ್ದಾರೆ.
ಮುಂದಿನ ಮೂರು ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ಪ್ರಶಾಂತ್, ರೇಣುಕಾ. ಸ್ಮಿತಾ ಕೆ., ಎಂ ಗಣೇಶ್ ರಾವ್, ಪ್ರಸಾದ್ ದೇವಾಡಿಗ, ಸದಾನಂದ ಬಿ.ಪೂಜಾರಿ, ಗಿರೀಶ್ ಹಾಗೂ ಪ್ರಧಾನ ಅರ್ಚಕರನ್ನು ಸಮಿತಿಯ ಸದಸ್ಯರನ್ನಾಗಿ ನಿಯುಕ್ತಿಗೊಳಿಸಲಾಗಿದೆ.
