ಕಾರ್ಕಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಐವರ ಮೇಲೆ ಮಾ. 27ರಂದು ಪ್ರಕರಣ ದಾಖಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ ಎಸ್ ಹಾಗೂ ಸಿಬ್ಬಂದಿಯವರು ಕಾರ್ಕಳ ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ ಕಪ್ಪು ಬಣ್ಣದ ಫಾರ್ಚುನರ್ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ, ಕಾರಿನಲ್ಲಿದ್ದ ಸುದರ್ಶನ್, ಕರ್ತವ್ಯ ಶೆಟ್ಟಿ, ಅರುಣ್ , ಶ್ರೀಕಾಂತ್ ಮತ್ತು ಶಶಿಕಾಂತ್ ಎಂಬವರು ಕಾರನ್ನು ನಿಲ್ಲಿಸದೆ ಪ್ರಸನ್ನ ಎಂ ಎಸ್ ಹಾಗೂ ಸಿಬ್ಬಂದಿಯವರನ್ನು ಕೊಲ್ಲುವ ಉದ್ದೇಶದಿಂದ ಅವರ ಮೇಲೆ ಕಾರನ್ನು ಹತ್ತಿಸಲು ಪ್ರಯತ್ನಿಸಿ ಕೊಲೆ ಮಾಡಲು ಯತ್ನಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
