
ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಹಾವೀರ ರಸ್ತೆ ಬಳಿಯ ಮೆಸ್ಕಾಂ ಕಚೇರಿ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂದು ಸಾಯಂಕಾಲ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ಮೃತಪಟ್ಟಿದ್ದಾರೆ
ಮೂಡುಬಿದಿರೆ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಯಾದ ಪ್ರೇಮಾ ಮತ್ತು ಮಗ ಶ್ರೀನಿವಾಸ ಶೆಟ್ಟಿ ಸಾವನ್ನಪ್ಪಿದ ದುರ್ದೈವಿಗಳು. ಇವರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಇವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಶೆಟ್ಟಿ ಯವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
