ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಿರತರ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಏ. 01ರಂದು ವರದಿಯಾಗಿದೆ.
ಹಿರ್ಗಾನ ಗ್ರಾಮದ ಸುಧೀಂದ್ರ ಪೂಜಾರಿ (47) ಹಾಗೂ ಕುಕ್ಕುಂದೂರು ದುರ್ಗಾ ಹೈಸ್ಕೂಲ್ ಬಳಿಯ ಮಹಮ್ಮದ್ ರಫೀಕ್ (37) ಇವರು ಹಿರ್ಗಾನ ಗ್ರಾಮದ ತುಂಬೆಹಿತ್ಲು ಗೋಕುಲ್ ಕಂಪೌಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ 1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಹೇಳಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹ ಮಾಡುತ್ತಿದ್ದು, ಈ ಸಮಯ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು (ತನಿಖೆ) ಶಿವಕುಮಾರ್ ಎಸ್ ಆರ್ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದಾರೆ.
ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ನಗದು ಹಣ ಒಟ್ಟು 2,180/-ರೂಪಾಯಿ, ಮಟ್ಕಾ ಸಂಖ್ಯೆ ಬರೆದ ಚೀಟಿ, ಪೆನ್ನು ಇವುಗಳನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
