ಅಜೆಕಾರು: ಕಾಡುಹೊಳೆಯಿಂದ ವ್ಯಕ್ತಿಯೋರ್ವರು ನಾಪತ್ತೆಯಾಗಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸಮನವಳ್ಳಿ ಗ್ರಾಮ ಹನುಮಂತಪ್ಪ (50) ಕಾಣೆಯಾದವರು.
ಹನುಮಂತಪ್ಪ ಇವರು ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ಮಿಲ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿಯೇ ವಾಸ್ತವ್ಯವಿದ್ದರು.
ಮಾ. 25ರಂದು ಸಂಜೆ 7 ಗಂಟೆಗೆ ಉಡುಪಿಗೆ ಹೋಗಿ ಬರುತ್ತೇನೆಂದು ಹೋಗಿದ್ದು, ಮಾ. 26ರಂದು ಅವರ ಮೊಬೈಲ್ಗೆ ಕರೆ ಮಾಡಿದಾಗ ಉಡುಪಿಯಲ್ಲಿ ಇರುವುದಾಗಿ ತಿಳಿಸಿದ್ದರು. ಆದರೆ, ನಂತರ ಪೋನ್ ಸ್ವೀಚ್ ಆಫ್ ಆಗಿದ್ದು, ಊರಿನಲ್ಲಿ ಮತ್ತು ಉಡುಪಿಯಲ್ಲಿರುವ ಸಂಬಂಧಿಕರಲ್ಲಿ ವಿಚಾರಿಸಿದಾಗ ಅವರ ಮಾಹಿತಿ ದೊರೆಯದೇ ಇದ್ದು ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.









